ತುಮಕೂರು: ಕಾರ್ ಮತ್ತು ಟಿಂಪೋ ಟ್ರಾವೆಲ್ (ಟಿ.ಟಿ) ಮಧ್ಯೆ ನಡೆದ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಕುಣಿಗಲ್ ತಾಲ್ಲೂಕಿನ ಬೇಗೂರು ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಮೃತರನ್ನು ಬೆಂಗಳೂರು ಸಂಜಯನಗರ ನಿವಾಸಿಗಳಾದ ವಿಜಯ್, ರಾಘು, ಸಂತೊಷ ಎಂದು ಗುರುತಿಸಲಾಗಿದೆ. ಐದು ಜನ ಗಾಯಗೊಂಡಿದ್ದಾರೆ.
ಎಲ್ಲರು ಬೆಂಗಳೂರಿನಿಂದ ಕಾರ್ ನಲ್ಲಿ ಹಾಸನದ ಕಡೆ ಹೋಗುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರ್, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ಎದುರುಗಡೆ ಬರುತ್ತಿದ್ದ ಟಿ.ಟಿ.ಗೆ ಗುದ್ದಿದ ಪರಿಣಾಮ ಕಾರ್ ನಲ್ಲಿದ್ದ ಮೂರು ಮಂದಿ ಮೃತಪಟ್ಟಿದ್ದಾರೆ.
ಧರ್ಮಸ್ಥಳದಿಂದ ಪ್ರವಾಸ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ಟಿ.ಟಿ ಯಲ್ಲಿದ್ದವರು ಹಾಗೂ ಕಾರ್ ಚಾಲಕ ಲೋಕೇಶ್ ಗಾಯಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.