ತುಮಕೂರು: ಜಿಲ್ಲೆಯಲ್ಲಿ 39 ನೀರು ಬಳಕೆದಾರರ ಸಹಕಾರ ಸಂಘಗಳು ಸ್ಥಗಿತಗೊಂಡಿದ್ದು, ಅವುಗಳನ್ನುಸಮಾಪನಗೊಳಿಸಲು ಕ್ರಮಕೈಗೊಳ್ಳಲಾಗಿದೆ.
ತುಮಕೂರು ಉಪ ವಿಭಾಗ ಕಾರ್ಯ ವ್ಯಾಪ್ತಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳು ಕಾರ್ಯ ಚಟುವಟಿಕೆ ನಡೆಸದೆ ಸ್ಥಗಿತಗೊಂಡಿವೆ. ಈ ಸಂಘಗಳ ಅಸ್ತಿತ್ವದಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಸಂಘಗಳ ಪುನಶ್ಚೇತನಕ್ಕೆ ಸದಸ್ಯರು, ಸಾರ್ವಜನಿಕರು 15 ದಿನಗಳ ಒಳಗೆ ಪೂರಕ ದಾಖಲೆಗಳೊಂದಿಗೆ ಸಕ್ಷಮ ಪ್ರಾಧಿಕಾರಕ್ಕೆ ಲಿಖಿತ ಮನವಿ ಸಲ್ಲಿಸಬಹುದು. ಇಲ್ಲದಿದ್ದರೆ ಸಂಘಗಳನ್ನು ಸಮಾಪನಗೊಳಿಸಲಾಗುವುದು ಎಂದು ಮೈಸೂರಿನ ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ (ಕಾಡಾ)ದ ಭೂ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.