ಪ್ರಜಾವಾಣಿ ವಾರ್ತೆ
ಕುಣಿಗಲ್ (ತುಮಕೂರು): ರಾಮನವಮಿ ಪಾನಕ ಸೇವನೆ ನಂತರ ತಾಲ್ಲೂಕಿನ ಮಂಗಳ ಗೊಲ್ಲರಹಟ್ಟಿ ಸುತ್ತಮುತ್ತಲಿನ 42 ಮಂದಿ ವಾಂತಿ, ಭೇದಿಯಿಂದ ಗುರುವಾರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ರಾಮನವಮಿ ಪ್ರಯುಕ್ತ ತಾಲ್ಲೂಕಿನ ಕೊಡವತ್ತಿ ಗ್ರಾಮದ ಸಮೀಪದ ಸುಬ್ರಹ್ಮಣ್ಯ ದೇವಾಲಯದಲ್ಲಿ ಬುಧವಾರ ನೀರು ಮಜ್ಜಿಗೆ, ಪಾನಕ ವಿತರಿಸಲಾಗಿತ್ತು. ಅವನ್ನು ಸೇವಿಸಿದ ಕೆಲವರಿಗೆ ಸಂಜೆಯಾಗುತ್ತಿದ್ದಂತೆ ವಾಂತಿ, ಭೇದಿ ಆರಂಭವಾಗಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಗುರುವಾರ ಮತ್ತಷ್ಟು ಜನರು ಅಸ್ವಸ್ಥಗೊಂಡು ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.
‘ದೋಷ ಪೂರಿತ ಪಾನಕ ಸೇವನೆಯೇ ಅನಾರೋಗ್ಯಕ್ಕೆ ಕಾರಣ’ ಎಂದು ವೈದ್ಯ ಮರಿಯಪ್ಪ ತಿಳಿಸಿದರು. ಶಾಸಕ ಡಾ.ರಂಗನಾಥ್ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.