ಪಾವಗಡ: ತಾಲ್ಲೂಕಿನ ಕೆ. ಸೇವಾಲಾಲ್ ಪುರದಲ್ಲಿ ಭಾನುವಾರ ಸಂಜೆ ಸಿಡಿಲು ಬಡಿದು ಐದು ಕುರಿಗಳು ಸಾವನ್ನಪ್ಪಿದ್ದು, ಕುರಿಗಾಹಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಕುರಿಗಾಹಿ ಶಂಕರನಾಯ್ಕ (36) ಗಾಯಗೊಂಡವರು.
ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜೆ ಗ್ರಾಮದ ಸಮೀಪದ ಕುರಿ ಶೆಡ್ನೊಳಗೆ ಕುರಿಗಳನ್ನು ಕೂಡಿ ಹಾಕುತ್ತಿದ್ದಾಗ ಸಿಡಿಲು ಬಡಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.