ತುಮಕೂರು: ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿಯ ದೊಡ್ಡಕಟ್ಟಿಗೆನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಚಿರತೆ ದಾಳಿ ಮಾಡಿ ಎಂಟು ಕುರಿಗಳನ್ನು ಕೊಂದು ಹಾಕಿದೆ.
ಶಿವಣ್ಣ ಎಂಬುವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ ಚಿರತೆಯು ಎಂಟು ಕುರಿಗಳನ್ನು ಬಲಿ ಪಡೆದಿದೆ. ಶಿವಣ್ಣ ಅವರು ತಮ್ಮ ಜೀವನೋಪಾಯಕ್ಕಾಗಿ ಕುರಿ ಸಾಕುವ ಕೆಲಸ ಮಾಡುತ್ತಿದ್ದರು. ಬದುಕಿಗೆ ಆಧಾರವಾಗಿದ್ದ ಕುರಿಗಳನ್ನು ಕಳೆದುಕೊಂಡು ದಿಕ್ಕು ತೋಚದಂತಾಗಿದ್ದಾರೆ.
ಇದನ್ನೂ ಓದಿ:ಉಡುಪಿ | ರಸ್ತೆಗೆ ನಾಥೂರಾಮ್ ಗೋಡ್ಸೆ ನಾಮಫಲಕ: ಆಕ್ರೋಶ
ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿರತೆ ದಾಳಿಯಿಂದ ಸತ್ತಿರುವ ಕುರಿಗಳಿಗೆ ನಿಯಮಾನುಸಾರ ಪರಿಹಾರ ನೀಡಲಾಗುವುದು. ಚಿರತೆ ಸೆರೆ ಹಿಡಿಯಲು ಬೋನ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.