ADVERTISEMENT

ಸಾಕು ನಾಯಿಯ ಎಳೆದೊಯ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 13:28 IST
Last Updated 17 ಏಪ್ರಿಲ್ 2024, 13:28 IST

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕೋಡ್ಲಹಳ್ಳಿ ಗ್ರಾಮ ಬಳಿಯ ಕಟ್ಟೆಬಾರೆಯಲ್ಲಿ ಚಿರತೆ ದಾಳಿ ನಡೆಸಿ ಸಾಕು ನಾಯಿಯನ್ನು ಎಳೆದೊಯ್ದಿದೆ.

ಕಟ್ಟೆಬಾರೆ ಗ್ರಾಮದ ಶಿವಶಂಕರಾರಾಧ್ಯ ಮಂಗಳವಾರ ಸಂಜೆ ತಮ್ಮ ಜಮೀನಿನಿಂದ ದನಗಳನ್ನು ಕರೆ ತರುವಾಗ ಹಿಂದೆ ಬಂದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ.

ಮೂರು ದಿನಗಳಿಂದ ಗ್ರಾಮದ ಸುತ್ತಮುತ್ತಾ ಚಿರತೆ ಕಾಣಿಸಿಕೊಂಡಿದೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮ‌ವಹಿಸಿ ಚಿರತೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.