ADVERTISEMENT

ಪತ್ನಿಯ ಶೀಲ ಶಂಕಿಸಿ ಕೊಲೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 12:36 IST
Last Updated 19 ಡಿಸೆಂಬರ್ 2019, 12:36 IST

ಕುಣಿಗಲ್: ತಾಲ್ಲೂಕಿನ ಚನ್ನಾಪುರದಲ್ಲಿ ಪತ್ನಿಯ ಶೀಲ ಶಂಕಿಸಿದ ಪತಿ ನಾಗರಾಜ ಕೋಲಿನಿಂದ ಬಡಿದು ಬುಧವಾರ ರಾತ್ರಿ ಹತ್ಯೆ ಮಾಡಿದ್ದಾನೆ.

ಪತ್ನಿ ಪವಿತ್ರಾ (38) ಕೊಲೆಯಾದ ಗೃಹಿಣಿ. 25 ವರ್ಷದ ಹಿಂದೆ ಮದುವೆಯಾದ ದಂಪತಿಗೆ ಪುತ್ರ, ಪುತ್ರಿ ಇದ್ದಾರೆ.

‘ಆರು ವರ್ಷಗಳಿಂದಲೂ ಇಬ್ಬರ ನಡುವೆ ವೈಮನಸ್ಯ ಉಂಟಾಗಿತ್ತು. ಹಲವಾರು ಬಾರಿ ಗ್ರಾಮಸ್ಥರ ಸಮ್ಮುಖದಲ್ಲಿ ರಾಜಿಸಂಧಾನ ನಡೆದಿದ್ದವು’ ಎಂದು ಪವಿತ್ರಾ ತಂದೆ ಗಂಗಾಧರಯ್ಯ ತಿಳಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲು ದೂರು ದಾಖಲಿಸಿದ್ದಾರೆ.

ADVERTISEMENT

ಘಟನೆ ಸಮಯದಲ್ಲಿ ಮಗ ಮಂಜುನಾಥ್ ತಂದೆಯ ವರ್ತನೆಗೆ ಬೆದರಿ ಪಕ್ಕದ ಮನೆಗೆ ಓಡಿಹೋಗಿದ್ದಾನೆ. ಪೊಲೀಸರು ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.