ADVERTISEMENT

ಆರೋಗ್ಯ ಕೇಂದ್ರಕ್ಕೆ ಎ.ಸಿ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 3:34 IST
Last Updated 26 ಅಕ್ಟೋಬರ್ 2021, 3:34 IST
ತೋವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಧುಗಿರಿ ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ ಸೋಮವಾರ ಭೇಟಿ ನೀಡಿ ವೈದ್ಯಾಧಿಕಾರಿ ಡಾ.ದಿವೇಕರ್ ಅವರಿಂದ ಮಾಹಿತಿ ಪಡೆದರು
ತೋವಿನಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಧುಗಿರಿ ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ, ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ ಸೋಮವಾರ ಭೇಟಿ ನೀಡಿ ವೈದ್ಯಾಧಿಕಾರಿ ಡಾ.ದಿವೇಕರ್ ಅವರಿಂದ ಮಾಹಿತಿ ಪಡೆದರು   

ತೋವಿನಕೆರೆ: ಮೊಂಬತ್ತಿ ಬೆಳಕಿನಲ್ಲಿ ಹೆರಿಗೆ ಮಾಡಿಸಿ ಸಾರ್ವಜನಿಕರ ಟೀಕೆಗೆ ಗುರಿಯಾಗಿರುವ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಧುಗಿರಿ ಉಪ ವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಸೋಮವಾರ ಭೇಟಿ ನೀಡಿ ಸಿಬ್ಬಂದಿ ಮತ್ತು ಬೆಸ್ಕಾಂ ಎಂಜಿನಿಯರ್ ಜೊತೆ ಸಭೆ ನಡೆಸಿದರು.

ಹೆರಿಗೆ ವಾರ್ಡ್‌ಗೆ ಭೇಟಿ ನೀಡಿ ಮಳೆ ನೀರು ಸೋರಿಕೆಯಾಗುತ್ತಿರುವುದನ್ನು ಪರಿಶೀಲಿಸಿದರು. ಕೊರಟಗೆರೆ ತಹಶೀಲ್ದಾರ್ ನಹೀದಾ ಜಂಜಂ, ಉಪ ತಹಶೀಲ್ದಾರ್ ರಾಜು, ಕಂದಾಯ ತನಿಖಾಧಿಕಾರಿ ರಂಗನಾಥ, ಆನಂದ, ಗ್ರಾ.ಪಂ. ಸದಸ್ಯರಾದ ಗಂಗಾಣಿ, ದಾಸಾಲಕುಂಟೆ ಗಿರೀಶ್, ವೆಂಕಟೇಶ್, ಟಿ.ಸಿ. ನಾಗರಾಜು ಹಾಜರಿದ್ಧರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT