ADVERTISEMENT

ತುಮಕೂರು ಜಿಲ್ಲೆಯಲ್ಲೂ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2022, 6:08 IST
Last Updated 16 ಮಾರ್ಚ್ 2022, 6:08 IST
   

ತುಮಕೂರು: ಸಮಾಜ ಕಲ್ಯಾಣ ಇಲಾಖೆ ಜನರಲ್ ಮ್ಯಾನೇಜರ್ ಎ.ಶ್ರೀನಿವಾಸ್ ಅವರಿಗೆ ಸೇರಿದ ಜಿಲ್ಲೆಯ ಎರಡು ಫಾರ್ಮ್ ಹೌಸ್‌ಗಳ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.

ಮಧುಗಿರಿ ತಾಲ್ಲೂಕಿನ ಪುರವರ ಸಮೀಪದ ಎಜಿಓ ಫಾರ್ಮ್ ಹಾಗೂ ತುಮಕೂರು ತಾಲ್ಲೂಕು ಕೌತಮಾರನಹಳ್ಳಿ ಬಳಿಯ ಎಜಿಓ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದೆ. ಬೆಳಗ್ಗೆಯಿಂದ ಶೋಧ ಕಾರ್ಯ ಮುಂದುವರಿದಿದ್ದು, ಹಣ, ಆಸ್ತಿ ಪತ್ರ ಹಾಗೂ ಇತರೆ ದಾಖಲೆಗಳಿಗೆ ಹುಡುಕಾಟ ನಡೆದಿದೆ. 16 ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT