ತುಮಕೂರು: ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಗುಬ್ಬಿ, ಮಧುಗಿರಿ, ತುರುವೇಕೆರೆ, ತಿಪಟೂರು ತಾಲ್ಲೂಕಿನಲ್ಲಿ ಜ. 8ರಿಂದ 29ರ ವರೆಗೆ ಸಾರ್ವಜನಿಕ ಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.
8ರಂದು ಗುಬ್ಬಿ ತಾಲ್ಲೂಕು ಪಂಚಾಯಿತಿ ಸಭಾಂಗಣ, 12ರಂದು ಮಧುಗಿರಿ ತಾ.ಪಂ ಸಭಾಂಗಣ, 20ರಂದು ತುರುವೇಕೆರೆ ತಾಲ್ಲೂಕು ದಂಡಿನಶಿವರ ಗ್ರಾ.ಪಂ ಸಭಾಂಗಣ, 29ರಂದು ತಿಪಟೂರು ತಾಲ್ಲೂಕು ಬಳುವನೇರಲು ಗ್ರಾ.ಪಂ ಸಭಾಂಗಣದಲ್ಲಿ ಮಧ್ಯಾಹ್ನ 12ರಿಂದ 2ರ ವರೆಗೆ ಸಭೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.