ADVERTISEMENT

ಪ್ರಾದೇಶಿಕ ಸಾರಿಗೆ ಕಚೇರಿಯ ನಿರೀಕ್ಷಕ ಎ.ಕೃಷ್ಣಮೂರ್ತಿ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 6:24 IST
Last Updated 15 ಜುಲೈ 2021, 6:24 IST
ಹಿರಿಯ ಮೋಟಾರು ವಾಹನ ನಿರೀಕ್ಷಕ ಎ.ಕೃಷ್ಣಮೂರ್ತಿ ಅವರ ಕೊರಟಗೆರೆ ತಾಲ್ಲೂಕಿನ ದೇವರಹಳ್ಳಿ ಫಾರಂ ಹೌಸ್.
ಹಿರಿಯ ಮೋಟಾರು ವಾಹನ ನಿರೀಕ್ಷಕ ಎ.ಕೃಷ್ಣಮೂರ್ತಿ ಅವರ ಕೊರಟಗೆರೆ ತಾಲ್ಲೂಕಿನ ದೇವರಹಳ್ಳಿ ಫಾರಂ ಹೌಸ್.   

ತುಮಕೂರು: ಬೆಂಗಳೂರಿನ ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ಎ.ಕೃಷ್ಣಮೂರ್ತಿ ಅವರ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದೇವರಹಳ್ಳಿ ಫಾರಂ ಹೌಸ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ಮಾಡುತ್ತಿದ್ದಾರೆ.

ಹತ್ತಕ್ಕೂ ಹೆಚ್ಚು ಜನರ ತಂಡ ದಾಳಿ ಮಾಡಿದ್ದು, ತಪಾಸಣೆಗೆ ಮುಂದಾಗಿದ್ದಾರೆ. ಫಾರಂ ಹೌಸ್‌ನಲ್ಲಿ ನಿರ್ಮಿಸುತ್ತಿರುವ ಐಶಾರಾಮಿ ಕಟ್ಟಡದಲ್ಲಿ ತಪಾಸಣೆ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.