ತುಮಕೂರು: ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಬೆಂಗಳೂರಿನ ಕೊಳೆಗೇರಿ ನಿರ್ಮೂಲನಾ ಮಂಡಳಿ ಕಾರ್ಯದರ್ಶಿ ಎಂ.ಎಸ್.ನಿರಂಜನ್ ಬಾಬು ಅವರಿಗೆ ಸೇರಿದ ತುಮಕೂರಿನ ನಿವಾಸದ ಮೇಲೆ ಬೆಂಗಳೂರಿನ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ನಿರಂಜನ್ ಬಾಬು ಈ ಹಿಂದೆ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿದ್ದರು.
ತುಮಕೂರಿನ ಶೆಟ್ಟಿಹಳ್ಳಿ ಮತ್ತು ಮಾರುತಿ ನಗರದ ಅವರ ನಿವಾಸ ‘ಅಮೃತ ವರ್ಷಿಣಿ’ಯಲ್ಲಿ ಶೋಧ ನಡೆಸಿದ ಅಧಿಕಾರಿಗಳು ಕಂಪ್ಯೂಟರ್, ಪ್ರಿಂಟರ್, ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ನಿರಂಜನ್ ಬಾಬು ಅವರ ಸ್ನೇಹಿತರು ವಾಸಿಸುತ್ತಿರುವ ಬೆಂಗಳೂರಿನ ಯಶವಂತಪುರದ ಅಪಾರ್ಟ್ಮೆಂಟ್ ಒಂದರ ಫ್ಲಾಟ್ನಲ್ಲಿಯೂ ಪರಿಶೀಲನೆ ನಡೆಸಿದ್ದಾರೆ.
ಡಿವೈಎಸ್ಪಿ ತಮ್ಮಯ್ಯ, ಇನ್ಸ್ಪೆಕ್ಟರ್ ವಿಜಯಲಕ್ಷ್ಮಿ, ಮಾಲತೇಶ್ ಹಾಗೂ ಸಿಬ್ಬಂದಿಯನ್ನು ಒಳಗೊಂಡ ತಂಡ ದಾಳಿ ನಡೆಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.