ತುಮಕೂರು: ತಾಲ್ಲೂಕಿನ ಹೆಗ್ಗರೆ ಗ್ರಾಮ ಲೆಕ್ಕಾಧಿಕಾರಿ ರಶ್ಮಿ ಹಾಗೂ ಅವರ ಸಹಾಯಕ ಪ್ರಕಾಶ್ ಲಂಚ ಸ್ವೀಕರಿಸುವಾಗ ಬುಧವಾರ ಎಸಿಬಿ ಬಲೆಗೆ
ಬಿದ್ದಿದ್ದಾರೆ.
ನಾಗರಾಜ್ ಎಂಬುವರ 3 ಗುಂಟೆ ಜಮೀನಿನ ಮ್ಯುಟೇಷನ್ ಮಾಡಿಕೊಡಲು ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ₹12 ಸಾವಿರಕ್ಕೆ ಒಪ್ಪಿದ್ದು, ಮಂಗಳವಾರ ಮುಂಗಡವಾಗಿ ₹2 ಸಾವಿರ ಲಂಚ ನೀಡಿದ್ದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ₹8 ಸಾವಿರ ಲಂಚ ಪಡೆಯುವಾಗ ಎಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂದಿನ ವಿಚಾರಣೆ
ನಡೆದಿದೆ.
ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.