ಕೊರಟಗೆರೆ: ತಾಲ್ಲೂಕಿನ ಕೋಳಾಲ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ತಿಮ್ಮೇಗೌಡ ಹಾಗೂ ಕಂಪ್ಯೂಟರ್ ಆಪರೇಟರ್ ಲಕ್ಕಣ್ಣ ಅವರು ಕಚೇರಿಯಲ್ಲಿ ಲಂಚ ತೆಗೆದುಕೊಳ್ಳುವ ಸಮಯದಲ್ಲಿ ಸೋಮವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕು ಮುತ್ತುಗದಹಳ್ಳಿ ಗ್ರಾಮದ ಮಧುಸೂದನ ಅವರ ಅಕ್ಕ ರಾಧಮ್ಮ ಅವರಿಗೆ ಕೋಳಾಲದಲ್ಲಿನ ನಿವೇಶನದ ಇ– ಖಾತೆ ಮಾಡಿಕೊಡಲು ₹3,500 ಹಣವನ್ನು ಪಡೆಯವಾಗ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸಿಬಿ ಡಿವೈಎಸ್ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.