ಶಿರಾ: ತಾಲ್ಲೂಕಿನ ಕಂಬದಹಳ್ಳಿ ಗೇಟ್ ಬಳಿ ಶನಿವಾರ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿರಾದ ಶಿವಾಜಿನಗರ ನಿವಾಸಿಗಳಾದ ತಿಮ್ಮಣ್ಣ (48) ಹಾಗೂ ಮಗ ಬಸವರಾಜು (26) ಬುಕ್ಕಾಪಟ್ಟಣ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕಂಬದಹಳ್ಳಿ ಗೇಟ್ ಬಳಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಾಗ ದ್ವಿಚಕ್ರ ವಾಹನದಲ್ಲಿದ್ದ ತಿಮ್ಮಣ್ಣ ಮತ್ತು ಆತನ ಮಗ ಬಸವರಾಜು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಶಿರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.