ADVERTISEMENT

ಬೈರಾಪುರ ಗೇಟ್ ಬಳಿ ಟಿಪ್ಪರ್ ಲಾರಿ–ಬೈಕ್‌ ಮಧ್ಯೆ ಡಿಕ್ಕಿ: ವ್ಯಕ್ತಿ ಸಾವು 

​ಪ್ರಜಾವಾಣಿ ವಾರ್ತೆ
Published 3 ಮೇ 2019, 10:42 IST
Last Updated 3 ಮೇ 2019, 10:42 IST
   

ತಿಪಟೂರು: ತಾಲ್ಲೂಕಿನ ಬಿದರೆಗುಡಿ ಸಮೀಪ ಬೈರಾಪುರ ಗೇಟ್ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್ ಲಾರಿ ಮತ್ತು ದ್ವಿಚಕ್ರವಾಹನ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ಪರಮೇಶ್ (36) ಮೃತಪಟ್ಟವರು. ಮಂಜುಳಾ( 35), ಸೌಂದರ್ಯ(3), ಚೇತನ್ (5) ಗಾಯಗೊಂಡವರು. ಅರಸಿಕೆರೆ ತಾಲ್ಲೂಕಿನ ಸಲಪರಹಳ್ಳಿ ಗ್ರಾಮದಿಂದ ಅಯ್ಯನಬಾವಿಗೆ ದ್ವಿಚಕ್ರವಾಹನದಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ಹೊನ್ನವಳ್ಳಿ ಠಾಣೆಯಲ್ಲಿ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.