ADVERTISEMENT

ಕೊರಟಗೆರೆ ಬಳಿ ಅಪಘಾತ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2022, 6:07 IST
Last Updated 16 ಅಕ್ಟೋಬರ್ 2022, 6:07 IST
   

ಕೊರಟಗೆರೆ: ತಾಲ್ಲೂಕಿನ ಜಟ್ಟಿಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಶನಿವಾರ ಮಧ್ಯರಾತ್ರಿ ಬೈಕ್ ಮತ್ತು ಲಾರಿ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ವೆಂಕಟೇಶ(38) ಮೃತಪಟ್ಟಿದ್ದಾರೆ.

ವೆಂಕಟೇಶ್ ಕೊರಟಗೆರೆಯ ನಿವಾಸಿಯಾಗಿದ್ದು,
ಪಟ್ಟಣದ ಬಾರ್ ಒಂದರಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಯಲ್ಲಾಪುರದ ಅಕ್ಕನ ಮನೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT