ADVERTISEMENT

ಶಿರಾ | ಅಪಘಾತ: ಕಾರು ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 14:26 IST
Last Updated 29 ಏಪ್ರಿಲ್ 2024, 14:26 IST

ಶಿರಾ: ರಾಷ್ಟ್ರೀಯ ಹೆದ್ದಾರಿ-48ರ ತರೂರು ಗೇಟ್ ಬಳಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ನೆಲಮಂಗಲದ ಅರುಣ್ (35) ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಅತಿ ವೇಗವಾಗಿ ಬರುತ್ತಿದ್ದ ಕಾರು ವಾಹನವನ್ನು ಹಿಂದಿಕ್ಕಲು ಹೋಗಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ರಸ್ತೆವಿಭಜಕದಿಂದ ಹಾರಿ ರಸ್ತೆಯ ಮತ್ತೊಂದು ಬದಿಗೆ ಹೋಗಿ ಬಿದ್ದಿದೆ. ಚಾಲಕ ಅರುಣ್ ಕಾರಿನಿಂದ ಕೆಳಗೆ ಬಿದ್ದು ಎದುರಿಗೆ ಬರುತ್ತಿದ್ದ ಲಾರಿಗೆ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ADVERTISEMENT

ಕಾರಿನಲ್ಲಿದ್ದ ನೆಲಮಂಗಲದ ನರಹರಿ ಕುಲಕರ್ಣಿ ಗಾಯಗೊಂಡಿದ್ದಾರೆ. ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.