ADVERTISEMENT

ಅಪಘಾತ: ನಿವೃತ್ತ ಪ್ರಾಧ್ಯಾಪಕ ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 5:29 IST
Last Updated 19 ಮಾರ್ಚ್ 2021, 5:29 IST
ಪ್ರೊ.ಬಿ.ಎಸ್.ಉಮಾಮಹೇಶ್ವರ್
ಪ್ರೊ.ಬಿ.ಎಸ್.ಉಮಾಮಹೇಶ್ವರ್   

ಶಿರಾ: ರಾಷ್ಟ್ರೀಯ ಹೆದ್ದಾರಿ- 48ರ ದೊಡ್ಡ ಆಲದಮರದ ಸಮೀಪ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಎಸ್.ಉಮಾಮಹೇಶ್ವರ್ (62) ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ದೊಡ್ಡ ಆಲದಮರದ ಬಳಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಾಗ ಪ್ರೊ.ಬಿ.ಎಸ್.ಉಮಾಮಹೇಶ್ವರ್ ಮೃತಪಟ್ಟಿದ್ದಾರೆ. ಕಾರಿನ ಚಾಲಕ ಗಾಯಗೊಂಡಿದ್ದಾರೆ.

ದಾವಣಗೆರೆ ವಿಶ್ವವಿದ್ಯಾನಿಲಯದ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.