ADVERTISEMENT

ಹಳ್ಳಕ್ಕೆ ಉರುಳಿದ ಕಾರು: ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 3:16 IST
Last Updated 21 ಅಕ್ಟೋಬರ್ 2025, 3:16 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ತುಮಕೂರು: ತಾಲ್ಲೂಕಿನ ನೆಲಹಾಳ್‌ ಬಳಿ ಸೋಮವಾರ ಬೆಳಗಿನ ಜಾವ ಕಾರು ಹಳ್ಳಕ್ಕೆ ಉರುಳಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕೃಷ್ಣ (33) ಮೃತರು. ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಕೃಷ್ಣ, ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.  

ADVERTISEMENT

ಬೆಳಗಿನ ಜಾವ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹಳ್ಳಕ್ಕೆ ಉರುಳಿದೆ. ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.