ADVERTISEMENT

ಕಾರು ಡಿಕ್ಕಿ; ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 10 ಮೇ 2020, 16:41 IST
Last Updated 10 ಮೇ 2020, 16:41 IST

ಕುಣಿಗಲ್: ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳ ಗ್ರಾಮದ ಬಳಿ ಭಾನುವಾರ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ.

ಮಂಟ್ಯಾ ಗ್ರಾಮದ ಹರೀಶ್ (28), ಗಿರೀಶ್ (30) ಮೃತರು. ಸ್ನೇಹಿತ ಪುಟ್ಟರಾಜು ಜತೆ ದ್ವಿಚಕ್ರವಾಹನದಲ್ಲಿ ಬಂದು ಸಮೀಪದ ತೋಟದಲ್ಲಿ ಕಲ್ಲಂಗಡಿ ಹಣ್ಣು ತಿಂದು ನಂತರ ವಾಪಸ್ ತೆರಳಲು ಈ ಮೂವರು ನಿಂತಿದ್ದರು. ಈ ವೇಳೆ ಕಾರು ಡಿಕ್ಕಿ ಹೊಡೆದಿದೆ. ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT