ADVERTISEMENT

ಕೊಡಿಗೇನಹಳ್ಳಿ: ಹಳ್ಳಿಗಳಲ್ಲೂ ಕಾರ್ಯಕರ್ತರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 4:44 IST
Last Updated 15 ಡಿಸೆಂಬರ್ 2021, 4:44 IST
ವಿಧಾನ ಪರಿಷತ್ ಚುನಾವಣೆಯಲ್ಲಿ ಆರ್. ರಾಜೇಂದ್ರ ಜಯಶೀಲರಾಗಿದ್ದರಿಂದ ಕೊಡಿಗೇನಹಳ್ಳಿ ಹೋಬಳಿಯ ಸುದ್ದೇಕುಂಟೆ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು
ವಿಧಾನ ಪರಿಷತ್ ಚುನಾವಣೆಯಲ್ಲಿ ಆರ್. ರಾಜೇಂದ್ರ ಜಯಶೀಲರಾಗಿದ್ದರಿಂದ ಕೊಡಿಗೇನಹಳ್ಳಿ ಹೋಬಳಿಯ ಸುದ್ದೇಕುಂಟೆ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು   

ಕೊಡಿಗೇನಹಳ್ಳಿ: ಕಾಂಗ್ರೆಸ್ ಅಭ್ಯರ್ಥಿ ಆರ್. ರಾಜೇಂದ್ರ ರಾಜಣ್ಣ ವಿಧಾನ ಪರಿಷತ್ ಚುನಾವಣೆಯಲ್ಲಿ ಜಯಶೀಲರಾದ ಹಿನ್ನೆಲೆಯಲ್ಲಿ ಕೊಡಿಗೇನಹಳ್ಳಿ ಪಟ್ಟಣ ಹಾಗೂ ಹೋಬಳಿಯ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದರಿಂದ ವಿಜಯಮಾಲೆ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಜನರಲ್ಲಿ ಮನೆ ಮಾಡಿತ್ತು. ಹಾಗಾಗಿ, ಮಂಗಳವಾರ ಫಲಿತಾಂಶ ಪ್ರಕಟವಾಗಲಿದ್ದರಿಂದ ಆಯಾ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಲು ಬೆಳಿಗ್ಗೆಯಿಂದಲೇ ಪಟಾಕಿ, ಸಿಹಿ ತಿನಿಸು ಮತ್ತು ಹೂವಿನ ಹಾರಗಳನ್ನು ತಂದಿಟ್ಟುಕೊಂಡು ಸಿದ್ಧತೆ ಮಾಡಿಕೊಂಡಿದ್ದರು.

ರಾಜೇಂದ್ರ ಜಯಭೇರಿ ಬಾರಿಸುತ್ತಿದ್ದಂತೆ ಕೊಡಿಗೇನಹಳ್ಳಿ, ಐಡಿಹಳ್ಳಿ ಹಾಗೂ ಪುರವರ ಹೋಬಳಿಯ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.