ADVERTISEMENT

ಕಲೆ, ಸಂಸ್ಕೃತಿ ಬೆಳೆಸಲು ಕಲಾ ರಂಗದ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ ಸಲಹೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 4:40 IST
Last Updated 5 ಅಕ್ಟೋಬರ್ 2021, 4:40 IST
ಮಧುಗಿರಿ ತಾಲ್ಲೂಕು ಅರಳಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ ಗ್ರಾಮೀಣ ಜನಪದ ಯುವ ಕಲಾ ವೃಂದ ಆಯೋಜಿಸಿದ್ದ ಗಾಯಕ ಎಸ್‌.ಪಿ. ಬಾಲಸುಬ್ರಮಣ್ಯಂ ನೆನಪಿನ ಸ್ವರ ನಮನ ಕಾರ್ಯಕ್ರಮವನ್ನು ಕಲಾ ರಂಗದ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ ಉದ್ಘಾಟಿಸಿದರು
ಮಧುಗಿರಿ ತಾಲ್ಲೂಕು ಅರಳಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ ಗ್ರಾಮೀಣ ಜನಪದ ಯುವ ಕಲಾ ವೃಂದ ಆಯೋಜಿಸಿದ್ದ ಗಾಯಕ ಎಸ್‌.ಪಿ. ಬಾಲಸುಬ್ರಮಣ್ಯಂ ನೆನಪಿನ ಸ್ವರ ನಮನ ಕಾರ್ಯಕ್ರಮವನ್ನು ಕಲಾ ರಂಗದ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ ಉದ್ಘಾಟಿಸಿದರು   

ಮಧುಗಿರಿ: ‘ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಯೊಬ್ಬ ನಾಗರಿಕರು ಉಳಿಸಿ ಬೆಳೆಸಬೇಕು’ ಎಂದು ಕಲಾ ರಂಗದ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಅರಳಾಪುರ ಗ್ರಾಮದಲ್ಲಿ ಚಾಮುಂಡೇಶ್ವರಿ ಗ್ರಾಮೀಣ ಜನಪದ ಯುವ ಕಲಾವೃಂದದ ಆಶ್ರಯದಲ್ಲಿ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನೆನಪಿಗಾಗಿ ಆಯೋಜಿಸಿದ್ದ ಸ್ವರ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿವೃತ್ತ ಪ್ರಾಂಶುಪಾಲ ಟಿ. ಗೋವಿಂದ ರಾಜು ಮಾತನಾಡಿದರು. ಸರ್ವಜ್ಞ ವೇದಿಕೆ ಅಧ್ಯಕ್ಷ ವೆಂಕಟರಮಣಪ್ಪ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ಕಲ್ಪನಾ ಗೋವಿಂದರಾಜು ಮಾತನಾಡಿದರು. ಚಾಮುಂಡೇಶ್ವರಿ ಗ್ರಾಮೀಣ ಜನಪದ ಕಲಾವೃಂದದ ಅಧ್ಯಕ್ಷ ಅರಳಾಪುರ ರಾಮಚಂದ್ರಪ್ಪ, ಗಾಯಕರಾದ ಮುನಿರಾಜು, ಮನೋಹರ ಮುರಳಿ, ಮೋನಿಕಾ, ಸಿದ್ದರಾಜು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.