ADVERTISEMENT

ತುಮಕೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ

ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 14:56 IST
Last Updated 7 ಆಗಸ್ಟ್ 2020, 14:56 IST
ತುಮಕೂರಿನಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಪ್ರತಿಭಟಿಸಿದ ಎಐಡಿಎಸ್‌ಒ ಕಾರ್ಯಕರ್ತೆಯರು
ತುಮಕೂರಿನಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಪ್ರತಿಭಟಿಸಿದ ಎಐಡಿಎಸ್‌ಒ ಕಾರ್ಯಕರ್ತೆಯರು   

ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಒಕ್ಕೂಟವು ರಾಜ್ಯದಾದ್ಯಂತ ಶುಕ್ರವಾರ ಕರೆ ನೀಡಿದ್ದ ಪ್ರತಿರೋಧ ದಿನಕ್ಕೆ ತುಮಕೂರಿನಲ್ಲೂ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ವಿದ್ಯಾರ್ಥಿಗಳು ಹಾಗೂ ಎಐಡಿಎಸ್‌ಒ ಕಾರ್ಯಕರ್ತರು ಭಾಗವಹಿಸಿ ತಮ್ಮ ಮನೆಗಳಲ್ಲಿಯೇ ಹೊಸ ಶಿಕ್ಷಣ ನೀತಿ ಪ್ರತಿಕೃತಿ ದಹನ ಮಾಡಿದರು. ಭಿತ್ತಿಪತ್ರಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಹೊಸ ಶಿಕ್ಷಣ ನೀತಿಯು ಅತ್ಯಂತ ಪ್ರಗತಿಪರ, ವಿದ್ಯಾರ್ಥಿ ಪರ ಎಂದು ಸರ್ಕಾರ ಸೇರಿದಂತೆ ಹಲವರು ಪ್ರಚಾರ ನಡೆಸುತ್ತಿದ್ದಾರೆ. ಆದರೆ, ವಾಸ್ತವದಲ್ಲಿ ಈ ನೀತಿಯು, ಶಿಕ್ಷಣ ಕ್ಷೇತ್ರವು ಈಗಾಗಲೇ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಿಗೆ ಯಾವುದೇ ಪರಿಹಾರ ಸೂಚಿಸಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿಯು ಖಾಸಗೀಕರಣವನ್ನು ಇನ್ನಷ್ಟು ಬೆಳೆಸುವ ನೀಲನಕ್ಷೆಯಾಗಿದೆ. ಬಡವರಿಂದ ಶಿಕ್ಷಣವನ್ನು ಬಹುದೂರ ಕೊಂಡೊಯ್ಯುವ ಈ ನೀತಿಯನ್ನು ಎಐಡಿಎಸ್‍ಒ ಖಂಡಿಸುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.