ADVERTISEMENT

ಜನಪರ ಕೆಲಸಗಳಿಗೆ ಸದಾ ಮನ್ನಣೆ

ಮಹಾನಗರಪಾಲಿಕೆ ನಾಮನಿರ್ದೇಶಿತ ಸದಸ್ಯರಿಗೆ ಶಾಸಕರ ಸಲಹೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 4:07 IST
Last Updated 26 ನವೆಂಬರ್ 2020, 4:07 IST
ಕಾರ್ಯಕ್ರಮದಲ್ಲಿ ನಾಮನಿರ್ದೇಶನಗೊಂಡ ಸದಸ್ಯರಾದ ಶಿವರಾಜು, ಮೋಹನ್, ನರಸಿಂಹಸ್ವಾಮಿ, ತ್ಯಾಗರಾಜು, ವಿಶ್ವನಾಥ್ ಅವರನ್ನು ಅಭಿನಂದಿಸಲಾಯಿತು
ಕಾರ್ಯಕ್ರಮದಲ್ಲಿ ನಾಮನಿರ್ದೇಶನಗೊಂಡ ಸದಸ್ಯರಾದ ಶಿವರಾಜು, ಮೋಹನ್, ನರಸಿಂಹಸ್ವಾಮಿ, ತ್ಯಾಗರಾಜು, ವಿಶ್ವನಾಥ್ ಅವರನ್ನು ಅಭಿನಂದಿಸಲಾಯಿತು   

ತುಮಕೂರು: ಮಹಾನಗರಪಾಲಿಕೆಗೆ ನಾಮನಿರ್ದೇಶನಗೊಂಡಿರುವ ಸದಸ್ಯರು ತಮ್ಮ ಇತಿಮಿತಿಯೊಳಗೆ ಸಾಧ್ಯವಾದಷ್ಟು ಮಟ್ಟಿಗೆ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಸಲಹೆ ನೀಡಿದರು.

ನಗರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟವು ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಸವಿಲೇವಾರಿ, ರಾಜ ಕಾಲುವೆಗಳ ಒತ್ತುವರಿ ತೆರವು, ಈ ಹಿಂದೆ ನಡೆದಿರುವ ಖಾತೆಗಳ ಅಕ್ರಮ ಕುರಿತು ಮಾಹಿತಿ ಕಲೆ ಹಾಕಿ ಜನರ ಮುಂದಿಡುವ ಕೆಲಸವನ್ನು ನಾಮನಿರ್ದೇಶಿತ ಸದಸ್ಯರು ಅದ್ಯತೆ ಮೇರೆಗೆ ಕೈಗೆತ್ತಿಕೊಳ್ಳಬೇಕು ಎಂದರು.

ವಿರೋಧ ಪಕ್ಷಗಳ ಸದಸ್ಯರಿಗೆ ಟೀಕಿಸುವ ತಪ್ಪುಗಳನ್ನು ಎತ್ತಿ ಹಿಡಿಯುವ ಅಧಿಕಾರ ಇದೆ. ಆದರೆ ಸರಿಯಾದ ತಿಳಿವಳಿಕೆ ಇಲ್ಲದೆ ದಾಖಲೆ ರಹಿತ ಆರೋಪ ಮಾಡುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಕೇವಲ ತಪ್ಪು ಕಂಡುಹಿಡಿಯುವುದೇ ಮುಖ್ಯವಲ್ಲ. ಪರಿಹಾರವು ಅಗತ್ಯ ಎಂದು ಹೇಳಿದರು.

ADVERTISEMENT

ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಳೆದ ಎರಡು ವರ್ಷಗಳಲ್ಲಿ ಅಭಿವೃದ್ಧಿ ಕೆಲಸಗಳು ಬರದಿಂದ ಸಾಗುತ್ತಿವೆ. ಸರ್ಕಾರಕ್ಕೆ ವಾಪಸ್ ಆಗಿದ್ದ ₹ 125 ಕೋಟಿ ಮತ್ತೆ ವಾಪಸ್ ಬಂದಿದೆ. ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇವುಗಳಲ್ಲಿ ಗುಣಮಟ್ಟ ಕಾಯ್ದುಕೊಂಡರೆ ಹತ್ತಾರು ವರ್ಷ ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ಮಾತನಾಡಿದರು. ಪಾಲಿಕೆ ಸದಸ್ಯೆ ಗಿರಿಜಾ, ಮಲ್ಲಿಕಾರ್ಜುನಯ್ಯ, ಸರೋಜಗೌಡ, ವಿನಯ್ ಜೈನ್, ಕೊಪ್ಪಳ ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.