ತುಮಕೂರು:ಶಾಸಕ ಆನಂದ ಸಿಂಗ್ ಅವರು ರಾಜೀನಾಮೆ ಯಾಕೆ ಕೊಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅವರು ರಾಜೀನಾಮೆ ಕೊಡುತ್ತಾರೆ. ಇವರು ರಾಜೀನಾಮೆ ಕೊಡುತ್ತಾರೆ ಎಂದು ವಿರೋಧ ಪಕ್ಷದವರು ಹೇಳಿಕೊಂಡು ಬಂದಿದ್ದಾರೆ. ಮಾಧ್ಯಮಗಳಲ್ಲಿ ರಾಜೀನಾಮೆ ಕೊಡುತ್ತಾರೆ ಎಂಬ ಶಾಸಕರ ಹೆಸರು ಪಟ್ಟಿಯಲ್ಲೂ ಆನಂದ್ ಸಿಂಗ್ ಹೆಸರು ಕೇಳಿರಲಿಲ್ಲ. ಆದರೆ, ಈಗ ಯಾಕೆ ರಾಜೀನಾಮೆ ಕೊಟ್ಟಿದ್ದಾರೆ ಎಂಬುದು ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.