ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಮೊದಲ ಕುಲಪತಿ ಪ್ರೊ.ಒ.ಅನಂತರಾಮಯ್ಯ (75) ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2005ರಿಂದ 2009ರ ವರೆಗೆ ವಿ.ವಿಯಲ್ಲಿ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ಅವಧಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾಲ ಯದಲ್ಲಿ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಮಾರು 15ಕ್ಕೂ ಹೆಚ್ಚು ಪುಸ್ತಕಗಳನ್ನು ರಚಿಸಿದ್ದಾರೆ.
ಅವರ ಹುಟ್ಟೂರು ಕೊರಟಗೆರೆ ಪಟ್ಟಣದಲ್ಲಿ ಭಾನುವಾರ ಅಂತ್ಯಕ್ರಿಯೆ ನೆರವೇರಲಿದೆ. ಅನಂತರಾಮಯ್ಯ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.