ADVERTISEMENT

ತಿಪಟೂರು: ಅಂಗನವಾಡಿ ಸಹಾಯಕಿ ಕೊಲೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 6:38 IST
Last Updated 15 ನವೆಂಬರ್ 2021, 6:38 IST

ತಿಪಟೂರು: ಅಂಗನವಾಡಿ ಸಹಾಯಕಿಯ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ.

ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಸಹಾಯಕಿ ಭಾರತಿ (30) ಕೊಲೆಯಾದವರು.

ಅದೇ ಗ್ರಾಮದ ಮೃತ ಮಹಿಳೆಯ ಗಂಡನ ಅಕ್ಕನ ಮಗ ದಿವಾಕರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಅಂಗನವಾಡಿ ಕಟ್ಟಡ ಹಿಂಭಾಗದ ಮರದ ಬಳಿಯಲ್ಲಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.