ಹುಳಿಯಾರು: ಹೋಬಳಿಯ ದಸೂಡಿ ಗ್ರಾಮದ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಇದೇ 2ರಂದು ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಲಿದೆ.
ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 12ಗಂಟೆವರೆಗೆ ರಥೋತ್ಸವ ನಡೆಯಲಿದೆ. ಆಗಮಿಸುವ ಭಕ್ತರಿಗೆ ಗ್ರಾಮದ ವಿವಿಧ ಕಲಾ ಸಂಘ ಹಾಗೂ ಯುವಕ ಸಂಘಗಳಿಂದ ಪಾನಕ, ಫಲಹಾರ, ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 9ಗಂಟೆಗೆ ‘ಗುರು ತಿಪ್ಪೇರುದ್ರಸ್ವಾಮಿ’ ಭಕ್ತಿ ಪ್ರಧಾನ ನಾಟಕ ಪ್ರದರ್ಶನ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.