ಕುಣಿಗಲ್: ‘ತಾಲ್ಲೂಕಿನಲ್ಲಿ ಮುಸ್ಲಿಂ ಜನಾಂಗದವರಿಗೆ ಪುರಸಭೆ, ತಾಲ್ಲೂಕು ಪಂಚಾಯಿತಿಯಲ್ಲಿ ಅಧಿಕಾರ ನೀಡಿದ್ದು ಒಂದು ದಾಖಲೆ’ ಎಂದು ಮಾಜಿ ಸಚಿವ ಡಿ.ನಾಗರಾಜಯ್ಯ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜೆಡಿಎಸ್ ಸದಸ್ಯ ಜಿಯಾ ಉಲ್ಲಾ ಅವರನ್ನು ಅಭಿನಂದಿಸಿ ಮಾತನಾಡಿದರು.
‘ಸಂಸದ ಡಿ.ಕೆ. ಸುರೇಶ್, ಶಾಸಕ ಡಾ.ರಂಗನಾಥ್ ಅಧಿಕಾರಕ್ಕೇರಿದ ಬಳಿಕ ತಾಲ್ಲೂಕು ಪಂಚಾಯಿತಿ, ಪುರಸಭೆಯಲ್ಲಾಗಲಿ ಮುಸ್ಲಿಂ ಜನಾಂಗದವರಿಗೆ ಅಧಿಕಾರ ನೀಡದೆ ಅನ್ಯಾಯ ಮಾಡಿದ್ದಾರೆ ಎಂದರು.
ವರಲಕ್ಷ್ಮಿ ರಂಗಧಾಮಯ್ಯ, ಸದಸ್ಯರಾದ ಹರೀಶ್ ನಾಯಕ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.