ADVERTISEMENT

ಆರ್ಯವೈಶ್ಯ ಸಮಾಜದ ಏಳಿಗೆಗೆ ಬದ್ಧ: ದೇವೇಗೌಡ

ತುಮಕೂರು ಜಿಲ್ಲಾ ಆರ್ಯವೈಶ್ಯ ಜನಾಂಗದ ಚಿಂತಕರ ಸಭೆಯಲ್ಲಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 18:05 IST
Last Updated 14 ಏಪ್ರಿಲ್ 2019, 18:05 IST
ಭಾನುವಾರ ತುಮಕೂರು ಜಿಲ್ಲಾ ಆರ್ಯವೈಶ್ಯ ಜನಾಂಗದ ಚಿಂತಕರ ಸಭೆಯನ್ನು ಎಚ್.ಡಿ.ದೇವೇಗೌಡ ಉದ್ಘಾಟಿಸಿದರು. ಶಾಸಕ ಟಿ.ಎ.ಶರವಣ, ಸೋಮೇಶ್ವರ ಗುಪ್ತಾ ಹಾಗೂ ಸಮಾಜದ ಮುಖಂಡರಿದ್ದರು
ಭಾನುವಾರ ತುಮಕೂರು ಜಿಲ್ಲಾ ಆರ್ಯವೈಶ್ಯ ಜನಾಂಗದ ಚಿಂತಕರ ಸಭೆಯನ್ನು ಎಚ್.ಡಿ.ದೇವೇಗೌಡ ಉದ್ಘಾಟಿಸಿದರು. ಶಾಸಕ ಟಿ.ಎ.ಶರವಣ, ಸೋಮೇಶ್ವರ ಗುಪ್ತಾ ಹಾಗೂ ಸಮಾಜದ ಮುಖಂಡರಿದ್ದರು   

ತುಮಕೂರು: ‘ಆರ್ಯ ವೈಶ್ಯ ಸಮಾಜದ ಅಶಯಕ್ಕೆ ಪೂರಕವಾಗಿ ಸ್ಪಂದಿಸಿ ಕೆಲಸ ಮಾಡುತ್ತೇನೆ. ಚುನಾವಣೆಯಲ್ಲಿ ಬೆಂಬಲಿಸಿ ದೇಶದಲ್ಲಿ ಪ್ರಜಾಸತ್ತಾತ್ಮಕ ಸರ್ಕಾರ ನೆಲೆ ನಿಲ್ಲಲು ಸಹಕರಿಸಬೇಕು’ ಎಂದು ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡ ಹೇಳಿದರು.

ನಗರದಲ್ಲಿ ಭಾನುವಾರ ತುಮಕೂರು ಜಿಲ್ಲಾ ಆರ್ಯವೈಶ್ಯ ಜನಾಂಗದ ಚಿಂತಕರ ಸಭೆಯಲ್ಲಿ ಮಾತನಾಡಿದರು.

'ಸಮುದಾಯದ ಸಮಗ್ರ ಅಭಿವೃದ್ಧಿಗೆ, ಸಂಘಟನೆ, ರಾಜಕೀಯ ಅವಕಾಶ ಸೇರಿದಂತೆ ಅನೇಕ ಅಂಶಗಳ ಬಗ್ಗೆ ಗಮನಕ್ಕೆ ತಂದಿದ್ದು, ನಿಮ್ಮ ಆಶಯಕ್ಕೆ ಪೂರಕವಾಗಿ ನಡೆಯುತ್ತೇನೆ. ಹಲವು ವರ್ಷಗಳೊಂದಿಗೆ ನಿಮ್ಮ ಸಮುದಾಯದವರೇ ಆದ ಶರವಣ ಅವರು ನನ್ನೊಂದಿಗೆ ಇದ್ದಾರೆ. ಅವರು ನಿಮ್ಮ ಸಮುದಾಯದ ಸಂಘಟನೆಗೆ ರಾಜ್ಯವ್ಯಾಪಿ ಸಂಚರಿಸಿ ಶ್ರಮಿಸುತ್ತಿದ್ದಾರೆ' ಎಂದರು.

ADVERTISEMENT

'ಜಿಲ್ಲೆಗೆ ಸಮಪರ್ಕ ಕುಡಿಯುವ ನೀರು ಕಲ್ಪಿಸುವುದು ನನ್ನ ಆದ್ಯತೆಯ ವಿಷಯವಾಗಿದೆ. ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬಾರದು' ಎಂದು ಮನವಿ ಮಾಡಿದರು.

ಸಮುದಾಯದ ಮುಖಂಡ ಎಸ್.ಆರ್.ಶ್ರೀಧರಮೂರ್ತಿ, ಸಿ.ಎ.ಸೋಮೇಶ್ವರಗುಪ್ತ, ಸಿ.ಆರ್.ಮೋಹನ್‌ಕುಮಾರ್, ಟಿ.ಟಿ.ಸತ್ಯನಾರಾಯಣ, ಗುಬ್ಬಿ ಅಶೋಕಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.