ADVERTISEMENT

ಗಡ್ಡ ರವಿ ಕೊಲೆ ಪ್ರಕರಣದ ಸಾಕ್ಷಿ ನಾಶಕ್ಕೆ ಹತ್ಯೆ

ರೌಡಿ ಶೀಟರ್ ಮಂಜುನಾಥ್ ಕೊಲೆ ಪ್ರಕರಣ; ಮತ್ತೆ ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 2:31 IST
Last Updated 19 ಡಿಸೆಂಬರ್ 2020, 2:31 IST

ತುಮಕೂರು: ರೌಡಿ ಶೀಟರ್ ಮಂಜುನಾಥ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂರು ಮಂದಿಯನ್ನು ಬಂಧಿಸಿದ್ದಾರೆ. ಈವರೆಗೆ ಒಟ್ಟು ಐದು ಮಂದಿಯನ್ನು ಬಂಧಿಸಿದಂತಾಗಿದೆ.

ಡಿ. 6ರಂದು ಪ್ರಮುಖ ಆರೋಪಿ ವಿಕಾಸ್‌ ಎಂಬುವರನ್ನು ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದರು. ಸದ್ಯ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪ‍ಡೆಯುತ್ತಿದ್ದಾರೆ. ಎರಡನೇ ಆರೋಪಿ ಅಜಯ್‌ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಈಗ ತುಮಕೂರಿನ ದೇವಿ ನಗರದ ಅಮಾನ್ (20), ಎನ್‌.ಆರ್‌.ಕಾಲೊನಿಯ ಎಂ.ಮನೋಜ್ (22) ಮತ್ತು ಹನುಮಂತಪುರದ ಮಹೇಶ್ (21) ಎಂಬುವವರನ್ನು ಬಂಧಿಸಿದ್ದಾರೆ.

ADVERTISEMENT

ಮಂಜುನಾಥ್, ಮಾಜಿ ಮೇಯರ್ ಗಡ್ಡರವಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದರು. ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ಕೊಲೆ ಮಾಡಿದ್ದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಮತ್ತೊಬ್ಬ ಆರೋಪಿ ಅರುಣ್ ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪತ್ತೆಗೆ ತಿಲಕ್‌ಪಾರ್ಡ್ ಸಿಪಿಐ ಎಸ್.ಮುನಿರಾಜು ನೇತೃತ್ವದ ತಂಡ ರಚಿಸಲಾಗಿತ್ತು. ಪಿಎಸ್‌ಐ ಶೇಷಾದ್ರಿ, ನವೀನ್, ಸಿಬ್ಬಂದಿ ಪರಮೇಶ್, ಸೈಮನ್ ವಿಕ್ಟರ್, ಮುನಾವರ್ ಪಾಷ, ಹನುಮರಂಗಯ್ಯ, ನರಸಿಂಹಮೂರ್ತಿ, ಲೋಕೇಶ್, ಎಸ್‌.ಎನ್.ನರಸಿಂಹರಾಜು, ನರಸಿಂಹಮೂರ್ತಿ, ಮುಂಜುನಾಥ್, ಸತೀಶ್ ಕಾರ್ಯಾಚರಣೆ ತಂಡದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.