ಕುಣಿಗಲ್: ರಾತ್ರಿ ಗಸ್ತಿನಲ್ಲಿದ್ದ ಇಬ್ಬರು ಪೊಲೀಸರ ಜತೆ ಅನುಚಿತವಾಗಿ ವರ್ತಿಸಿ ಹಲ್ಲೆ ನಡೆಸಿದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯ ಕಂದಾಯ ಇಲಾಖೆ ಸಿಬ್ಬಂದಿ ವೆಂಕಟೇಶ್ ಮತ್ತು ರಾಮಚಂದ್ರ ಬಂಧಿತರು.
ಸೋಮವಾರ ರಾತ್ರಿ ಕಾನ್ಸ್ಟೆಬಲ್ ಗಳಾದ ಮಿಥುನ್ ಮತ್ತು ಸುಮನ್ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ಗಸ್ತು ತಿರುಗುತ್ತಿದ್ದರು. ದಾಖಲೆಗಾಗಿ ಮೋದಿ ಕೇರ್ ಅಂಗಡಿ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಮಯದಲ್ಲಿ ಬಂದ ಆರೋಪಿಗಳು ಅವರೊಟ್ಟಿಗೆ ವಾಗ್ವಾದ ನಡೆಸಿ ಅನುಚಿತವಾಗಿ ನಡೆದುಕೊಂಡು ಹಲ್ಲೆ ನಡೆಸಿದ್ದಾರೆ.
ಈ ಇಬ್ಬರ ಉಪಟಳದಿಂದ ಬೇಸತ್ತ ಪೊಲೀಸರು 112 ತುರ್ತು ವಾಹನಕ್ಕೆ ಕರೆ ಮಾಡಿದ್ದಾರೆ. ತುರ್ತು ವಾಹನದ ಸಿಬ್ಬಂದಿ ಮತ್ತು ಸಿಪಿಐ ಗುರುಪ್ರಸಾದ್ ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಿಥುನ್ ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.