ADVERTISEMENT

ಗಮನ ಸೆಳೆದ ಯೋಗ ನಡಿಗೆ ಜಾಥಾ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಗರದಲ್ಲಿ ಜನಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 16:01 IST
Last Updated 20 ಜೂನ್ 2019, 16:01 IST
ಯೋಗ ನಡಿಗೆ ಜಾಥಾದಲ್ಲಿ ಪಾಲ್ಗೊಂಡ ಜನರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು
ಯೋಗ ನಡಿಗೆ ಜಾಥಾದಲ್ಲಿ ಪಾಲ್ಗೊಂಡ ಜನರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು   

ತುಮಕೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಮುನ್ನಾದಿನವಾದ ಗುರುವಾರ ನಗರದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದವರೆಗೆ ಯೋಗ ನಡಿಗೆ ಜಾಥಾ ನಡೆಯಿತು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಂಜೀವಮೂರ್ತಿ, ಅಶ್ವಿನಿ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಹರೀಶ್, ಯೋಗ ಸಮನ್ವಯಾಧಿಕಾರಿ ಡಾ.ಪ್ರಭಾಕರ್, ಎನ್‌ಸಿಸಿ ಕಮಾಂಡಿಂಗ್ ಅಧಿಕಾರಿ ಕರ್ನಲ್ ಶೈಲೇಶ್ ಶರ್ಮಾ ಹಾಗೂ ಡಾ.ಗುರುಪ್ರಸಾದ್ ಅವರು ಜಾಥಾಕ್ಕೆ ಚಾಲನೆ ನೀಡಿದರು.

ಜಿಲ್ಲಾಡಳಿತ, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿವಿಧ ನರ್ಸಿಂಗ್ ಕಾಲೇಜುಗಳು, ಮತ್ತಿತರ ಇಲಾಖೆ ಹಾಗೂ ಸ್ವಯಂ ಸೇವಾ ಸಂಘಗಳ ಆಶ್ರಯದಲ್ಲಿ ಜಾಥಾ ಆಯೋಜಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.