ADVERTISEMENT

ಶಿರಾ: ಅಪಘಾತ, ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2019, 14:01 IST
Last Updated 12 ಏಪ್ರಿಲ್ 2019, 14:01 IST
ಶಿರಾದ ಬೈಪಾಸ್ ನಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿರುವುದು.
ಶಿರಾದ ಬೈಪಾಸ್ ನಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿರುವುದು.   

ಶಿರಾ: ನಗರದ ಬೈಪಾಸ್ ರಸ್ತೆಯ ಕರಿಯಮ್ಮ ದೇವಿ ದೇವಸ್ಥಾನದ ಬಳಿ ಶುಕ್ರವಾರ ಕಾರು ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಬಾಗಲಕೋಟೆಗೆ ಹೋಗುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 48ರ ಬೈಪಾಸ್‌ನಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಾಗ ಕಾರಿನಲ್ಲಿದ್ದ ಬಾಗಲಕೋಟೆ ನಗರದ ಮಹಾಂತೇಶ್ ಆಲಗುಂಡಿ (41) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿ ಭಾಗ್ಯವತಿ (28) ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮೃತಪಟ್ಟಿದ್ದಾರೆ.

ಗಾಯಗೊಂಡಿದ್ದ ಅವರ ಮಕ್ಕಳಾದ ಪ್ರಗತಿ, ಪ್ರಣವ್‌ ಹಾಗೂ ಕಾರಿನಲ್ಲಿದ್ದ ಬಸವರಾಜು, ಗಿರೀಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಶಿರಾ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.