ADVERTISEMENT

ಮದುವೆಗೆ ಹೊರಟವರು ಮಸಣಕ್ಕೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2019, 13:36 IST
Last Updated 19 ಜೂನ್ 2019, 13:36 IST
   

ಮಧುಗಿರಿ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರಪಾಳದಲ್ಲಿ ಬುಧವಾರ ಸಂಜೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕವಾಡಿಗರಪಾಳ್ಯದ ನಿವಾಸಿ ಶಿವಣ್ಣ (60) ಹಾಗೂ ಮಧುಗಿರಿ ಪಟ್ಟಣದ ಕವಾಡಿಗರ ಬೀದಿಯ ನಿವಾಸಿ ಬೀರಣ್ಣ (65) ಮೃತರು.

ಪಟ್ಟಣದ ಎಂ.ಎಸ್.ರಾಮಯ್ಯ ಸಮುದಾಭವನದಲ್ಲಿ ಸಂಬಂಧಿಕರ ವಿವಾಹಕ್ಕೆ ತೆರಳುತ್ತಿದ್ದಾಗ, ಹಿಂಬಂದಿಯಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ. ಮಧುಗಿರಿ ಪೊಲೀಸ್ ಠಾಣೆಯ ಸಿಪಿಐ ದಯಾನಂದ ಶೇಗುಣಸಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.