ಮೈಸೂರು: ಮೈಸೂರು–ಬಾಗಲಕೋಟೆ–ಮೈಸೂರು ನಡುವೆ ನಿತ್ಯ ಸಂಚರಿಸುವ ಬಸವ ಎಕ್ಸ್ಪ್ರೆಸ್ ರೈಲು ಸಂಚಾರ ಅ.6ರವರೆಗೂ ಸಂಪೂರ್ಣ ಸ್ಥಗಿತಗೊಳ್ಳಲಿದೆ.
ಸೆಂಟ್ರಲ್ ರೈಲ್ವೆಯ ಸೊಲ್ಲಾಪುರ ವಿಭಾಗದಲ್ಲಿ ದ್ವಿಪಥ ಹಳಿ ಜೋಡಣೆ ಸಲುವಾಗಿ ಹಾಗೂ ಸೊಲ್ಲಾಪುರ-ವಾಡಿ ವಿಭಾಗದ ಕಲಬುರ್ಗಿ–ಸವಲ್ಗಿ ರೈಲ್ವೆ ನಿಲ್ದಾಣಗಳ ನಡುವೆ ಇಂಟರ್ ಲಾಕಿಂಗ್ ಕೆಲಸ ನಡೆದಿರುವುದರಿಂದ ಬಸವ ಎಕ್ಸ್ಪ್ರೆಸ್ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.