ಮಧುಗಿರಿ: ಮಿಡಿಗೇಶಿ ಹೋಬಳಿಯ ಜಿ.ಡಿ.ಪಾಳ್ಯ ಗ್ರಾಮದಲ್ಲಿ ರೈತ ಕರಿಯಣ್ಣ (50) ಮೇಲೆ ಕರಡಿ ಮಂಗಳವಾರ ರಾತ್ರಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ.
ಜಮೀನಿನ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಪೊದೆಯಲ್ಲಿದ್ದ ಕರಡಿ ಏಕಾಏಕಿಯಾಗಿ ಕರಿಯಣ್ಣರ ಮೇಲೆ ದಾಳಿ ಮಾಡಿದೆ. ತಲೆ ಮತ್ತು ಕಾಲಿನ ಭಾಗಗಳಲ್ಲಿ ಗಾಯಗಳಾಗಿವೆ. ಅವರ ಚೀರಾಟದಿಂದ ಅಕ್ಕ–ಪಕ್ಕದ ಜಮೀನುಗಳಲ್ಲಿ ಇದ್ದ ರೈತರು ಸ್ಥಳಕ್ಕೆ ಬಂದು ಕರಡಿಯನ್ನು ಓಡಿಸಿದ್ದಾರೆ.
ಕರಿಯಣ್ಣಗೆ ಮಧುಗಿರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.