ತುಮಕೂರು: ಕಳೆದ ಲೋಕಸಭಾ ಚುನಾವಣೆಯಲ್ಲಿನ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾಧಿಕಾರಿ ಕೆ.ರಾಕೇಶ್ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ಶುಭಾ ಕಲ್ಯಾಣ್ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಟಿ.ಭೂಬಾಲನ್ ಅವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಅರಸಿ ಬಂದಿದೆ.
ಈ ಪ್ರಶಸ್ತಿಯನ್ನು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯಿಂದ ಕೊಡಮಾಡಲಾಗುತ್ತಿದೆ. ಪ್ರಶಸ್ತಿಯು ಸ್ಮರಣಿಕೆ ಮತ್ತು ಪ್ರಶಂಸೆಯ ಪ್ರಮಾಣಪತ್ರ ಒಳಗೊಂಡಿದೆ.
10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಪುರಭವನದಲ್ಲಿ ಶನಿವಾರ (ಜ. 25) ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ರಾಜ್ಯಪಾಲರು ಪ್ರದಾನ ಮಾಡಲಿದ್ದಾರೆ.
ಪಾಲಿಕೆಯ ಆಯುಕ್ತರಾಗಿದ್ದ ಭೂಬಾಲನ್ ಅವರನ್ನು ಇತ್ತೀಚೆಗೆ ಬೆಳಗಾವಿಯ ಮಲಪ್ರಭಾ–ಘಟಪ್ರಭಾ ಯೋಜನೆಯ ವಿಶೇಷ ಜಿಲ್ಲಾಧಿಕಾರಿ(ಭೂಸ್ವಾಧೀನ) ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಅದೇ ವೇಳೆಗೆ ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಂದಿತ್ತು. ಇವರನ್ನು ಅಲ್ಲಿನ ಚುನಾವಣಾ ಅಧಿಕಾರಿಯಾಗಿ ನಿಯೋಜಿಸಲಾಗಿತ್ತು. ಆ ವೇಳೆಯಲ್ಲಿನ ಕರ್ತವ್ಯ ನಿರ್ವಹಣೆಗಾಗಿಯೂ ಪ್ರಶಸ್ತಿಯನ್ನು ಕೊಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.