ADVERTISEMENT

ಭಾರತ್‌ ಬಂದ್‌ಗೆ ತುಮಕೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 5:33 IST
Last Updated 27 ಸೆಪ್ಟೆಂಬರ್ 2021, 5:33 IST
   

ತುಮಕೂರು: ಕೃಷಿ ಕಾಯ್ದೆ ವಾಪಸ್‌ಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆನೀಡಿರುವ ಬಂದ್‌ಗೆ ವಿವಿಧ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಪ್ರತಿಭಟನೆಗೆ ಇಳಿದಿವೆ. ಕಾರ್ಮಿಕ ಸಂಘಟನೆಗಳು, ಎಡ ಪಕ್ಷಗಳು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿವೆ.

ಬಸ್, ಆಟೊ ಹಾಗೂ ಇತರ ವಾಹನಗಳ ಸಂಚಾರ ಮುಂದುವರೆದಿದೆ. ವಾಣಿಜ್ಯ, ವಹಿವಾಟು ಎಂದಿನಂತೆ ಆರಂಭವಾಗಿದೆ. ನಗರ ಸೇರಿದಂತೆ ಜಿಲ್ಲೆಯಲ್ಲಿ ಬಂದ್ ವಾತಾವರಣ ಕಂಡುಬರುತ್ತಿಲ್ಲ. ಎಲ್ಲೆಡೆ ಪ್ರತಿಭಟನೆಗಳು ಆರಂಭವಾಗಿವೆ.

ರೈತ ಸಂಘಟನೆ ಮುಖಂಡರು, ರೈತರು ನಗರ ಸಂಪರ್ಕಿಸುವ ರಸ್ತೆಗಳ ಮೂಲಕ ಮೆರವಣಿಗೆಯಲ್ಲಿ ಬಂದು ನಗರದ ಟೌನ್‌ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.