ತುಮಕೂರು: ಮೆದುಳು ಜ್ವರದಿಂದ ನೂರಾರು ಬಡ ಮಕ್ಕಳುಸಾವನ್ನಪ್ಪಿದ್ದು ಈ ಘಟನೆಯನ್ನು ನಿಭಾಯಿಸಲು ಬಿಹಾರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ಯುಸಿಐ, ಕಮ್ಯುನಿಸ್ಟ್ ) ಪಕ್ಷದ ಕಾರ್ಯಕರ್ತರು ನಗರದ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು. ಮೃತ ಮಕ್ಕಳು ಬಡವರು, ಕೂಲಿಕಾರ್ಮಿಕರ ಮಕ್ಕಳಾಗಿದ್ದಾರೆ. ಈ ಕುಟುಂಬಗಳಿಗೆ ₹ 10 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಂಜುಳಾ, ರತ್ನಮ್ಮ, ಅಶ್ವಿನಿ, ಸಾಗರ್, ಅಕ್ಷರ, ಕಲ್ಯಾಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.