ತುಮಕೂರು: ರಾಷ್ಟ್ರೀಯ ಹೆದ್ದಾರಿ 48 ರ ಕೆ.ಬೊಮ್ಮನಹಳ್ಳಿ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪ್ರವೀಣ್ ಮತ್ತು ರಮೇಶ(21) ಎಂಬ ಯುವಕರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.
ತುಮಕೂರು ಸಮೀಪವಿರುವ ಕೆ.ಪಾಲಸಂದ್ರ ಪಾಳ್ಯದ ನಿವಾಸಿಗಳಾದ ಪ್ರವೀಣ್ ಹಾಗೂ ರಮೇಶ್ ಅವರು ವಸಂತ ನರಸಪುರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಇರುವ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದರು. ರಾತ್ರಿ ಕೆಲಸ ಮುಗಿಸಿಕೊಂಡು ಮುಂಜಾನೆ ವಾಪಸ್ ಮನೆಗೆ ಹಿಂತಿರುಗುವಾಗ ಹಿಂದಿನಿಂದ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಈ ಇಬ್ಬರೂ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರು.
ಡಿಕ್ಕಿ ಹೊಡೆತಕ್ಕೆ ಸ್ಥಳದಲ್ಲಿಯೇ ರಮೇಶ ಸ್ಥಳದಲ್ಲಿಯೇ ಮೃತಪಟ್ಟಿದ್ದರು.ಮತ್ತೊಬ್ಬ ಗಾಯಾಳು ಪ್ರವೀಣ್ ಎಂಬುವನನ್ನು ಪೊಲೀಸರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಎಂಟು ಗಂಟೆಗೆ ಮೃತಪಟ್ಟರು.
ಮತ್ತೊಬ್ಬ ಗಾಯಾಳು ದೊಡ್ಡಬಳ್ಳಾಪುರಸ ಮಧುಸೂಧನ್ ಅವರಿಗೆ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರು ಸಹ ಅದೇ ಬೈಕ್ ನಲ್ಲಿ ಕೂತಿದ್ದರು.
ಘಟನೆ ಸಂಬಂಧ ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.