ತುಮಕೂರು: ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮಂಜುನಾಥ(25) ಮೃತಪಟ್ಟ ಘಟನೆ ತಾಲ್ಲೂಕಿನ ನಾಗವಲ್ಲಿ ಬಳಿ ಬುಧವಾರ ರಾತ್ರಿ ನಡೆದಿದೆ.
ಮಂಜುನಾಥ ಹೆಬ್ಬೂರು ಹೋಬಳಿಯ ಗಂಗನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ನಾಗವಲ್ಲಿಯ ವೈನ್ಸ್ ಸ್ಟೋರ್ ನಲ್ಲಿ ಅಸಿಸ್ಟೆಂಟ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.
ನಾಗವಲ್ಲಿಯಿಂದ ಕುಣಿಗಲ್ ಕಡೆಗೆ ಹೊರಟಿದ್ದ ಬೈಕ್ ಇದೇ ರಸ್ತೆಯಲ್ಲಿ ತೆರಳುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.