ADVERTISEMENT

ಕೊರಟಗೆರೆ | ಮತದಾರರ ಜಾಗೃತಿಗೆ ಬೈಕ್ ರ‍್ಯಾಲಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2023, 5:45 IST
Last Updated 7 ಏಪ್ರಿಲ್ 2023, 5:45 IST
ಕೊರಟಗೆರೆ ತಾಲ್ಲೂಕು ಪಂಚಾಯಿತಿಯಿಂದ ನಡೆದ ಮತದಾನ ಜಾಗೃತಿ ಕುರಿತ ಬೈಕ್ ರ‍್ಯಾಲಿಗೆ ತಾ.ಪಂ. ಇಒ ಡಾ.ಡಿ. ದೊಡ್ಡಸಿದ್ದಯ್ಯ ಹಸಿರು ನಿಶಾನೆ ತೋರಿದರು
ಕೊರಟಗೆರೆ ತಾಲ್ಲೂಕು ಪಂಚಾಯಿತಿಯಿಂದ ನಡೆದ ಮತದಾನ ಜಾಗೃತಿ ಕುರಿತ ಬೈಕ್ ರ‍್ಯಾಲಿಗೆ ತಾ.ಪಂ. ಇಒ ಡಾ.ಡಿ. ದೊಡ್ಡಸಿದ್ದಯ್ಯ ಹಸಿರು ನಿಶಾನೆ ತೋರಿದರು   

ಕೊರಟಗೆರೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ಹೋಬಳಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ತಾಲ್ಲೂಕು ಪಂಚಾಯಿತಿಯ ಅನುಷ್ಠಾನಾಧಿಕಾರಿಗಳ ನೇತೃತ್ವದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ತಂಡದೊಂದಿಗೆ ಬೈಕ್ ರ‍್ಯಾಲಿ ಮೂಲಕ ಮತದಾನ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು.

ತಾಲ್ಲೂಕಿನ ಕಸಬಾ, ಹೊಳವನಹಳ್ಳಿ, ಚನ್ನರಾಯನದುರ್ಗ, ಕೋಳಾಲ ಹೋಬಳಿ ವ್ಯಾಪ್ತಿಯ ಎಲ್ಲಾ ಪಂಚಾಯಿತಿಗಳ ಗ್ರಾಮಗಳಲ್ಲಿ ಬೀದಿ ನಾಟಕದ ಮೂಲಕ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ಡಿ. ದೊಡ್ಡಸಿದ್ದಯ್ಯ, ಸಿಡಿಪಿಒ ಅಂಬಿಕಾ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ದೀಪ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಸಿಬ್ಬಂದಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.