ತುಮಕೂರು: ಹತ್ತು ವರ್ಷಗಳ ನಂತರ ತುಮಕೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಯಿತು.
ಶುಕ್ರವಾರ ನಡೆದ ಚುನಾವಣೆಯಲ್ಲಿ ಪಾಲಿಕೆ ಮೇಯರ್ ಆಗಿ ಬಿಜೆಪಿಯ ಬಿ.ಜಿ. ಕೃಷ್ಣಪ್ಪ, ಉಪಮೇಯರ್ ಆಗಿ ಜೆಡಿಎಸ್ನ ನಾಜೀಮಾಬಿ ಅವರು ಅವಿರೋಧವಾಗಿ ಆಯ್ಕೆಯಾದರು.
ಪಾಲಿಕೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತವಿರಲಿಲ್ಲ. ಹಿಂದಿನ ಬಾರಿ ಕಾಂಗ್ರೆಸ್– ಜೆಡಿಎಸ್ ಒಟ್ಟಾಗಿ ಅಧಿಕಾರ ಹಂಚಿಕೊಂಡು ಅಧಿಕಾರ ಹಿಡಿದಿದ್ದವು. ಆದರೆ ಈ ಬಾರಿ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ, ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆ ಸದಸ್ಯರಲ್ಲಿ ಬಿಜೆಪಿಯ ಕೃಷ್ಣಪ್ಪ ಅವರೊಬ್ಬರೇ ಪರಿಶಿಷ್ಟ ಪಂಗಡದ ಮೀಸಲಾತಿ ಕ್ಷೇತ್ರದಿಂದ ಆಯ್ಕೆ ಆಗಿದ್ದ ಏಕೈಕ ಸದಸ್ಯ.
ಕಾಂಗ್ರೆಸ್– ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರೂ ಎಸ್ಟಿ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಸದಸ್ಯರು ಇರಲಿಲ್ಲ. ಹಾಗಾಗಿ ಬಿಜೆಪಿಗೆ ಅಧಿಕಾರದ ಅದೃಷ್ಟ ಒಲಿದು ಬಂತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.