ADVERTISEMENT

ತುಮಕೂರು: ಗೃಹ ಸಚಿವರ ಎದುರೇ ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ತಳ್ಳಾಟ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2022, 10:40 IST
Last Updated 9 ಡಿಸೆಂಬರ್ 2022, 10:40 IST
   

ತುಮಕೂರು: ಕೊರಟಗೆರೆಯಲ್ಲಿ ಶುಕ್ರವಾರ ಅಂಬೇಡ್ಕರ್‌ ವಸತಿ ಶಾಲೆಯ ಉದ್ಘಾಟನೆಯ ಸಮಯದಲ್ಲಿ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಅನಿಲ್‌ಕುಮಾರ್‌ ಬೆಂಬಲಿಗರು ಮತ್ತು ಕಾಂಗ್ರೆಸ್‌ಕಾರ್ಯಕರ್ತರ ಮಧ್ಯೆ ಪರಸ್ಪರ ನೂಕಾಟ, ತಳ್ಳಾಟ ನಡೆಯಿತು.

ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಡಾ.ಜಿ.ಪರಮೇಶ್ವರ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಸಂದರ್ಭ, ಅನಿಲ್‌ ಕುಮಾರ್‌ ಬೆಂಬಲಿಗರು ಬಿಜೆಪಿಯ ಬಾವುಟ ಹಾಗೂ ಕಮಲದ ಶಾಲು ಧರಿಸಿ ಘೋಷಣೆ ಕೂಗುತ್ತಾ ಶಾಲೆಯ ಒಳಗೆ ಪ್ರವೇಶಿಸಿದರು. ಘೋಷಣೆ ಕೂಗಿದ್ದರಿಂದ ಆರಂಭವಾದ ಗಲಾಟೆ ಒಬ್ಬರಿಗೊಬ್ಬರು ಕೈ ಕೈ ಮಿಲಾಯಿಸಿಕೊಳ್ಳುವ ಹಂತ ತಲುಪಿತು.ಮಧ್ಯ ಪ್ರವೇಶಿಸಿದ ಪೊಲೀಸರು ವಾತಾವರಣ ತಿಳಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT