ADVERTISEMENT

ಬಿಜೆಪಿ ತೆಕ್ಕೆಗೆ ತಿಪಟೂರು ಎಪಿಎಂಸಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 1:56 IST
Last Updated 19 ಸೆಪ್ಟೆಂಬರ್ 2020, 1:56 IST
ತಿಪಟೂರು ಎಪಿಎಂಸಿ ಆವರಣದಲ್ಲಿ ಶಾಸಕ ಬಿ.ಸಿ.ನಾಗೇಶ್ ಮತ್ತು ಬಿಜೆಪಿ ಮುಖಂಡ ಲೋಕೇಶ್ವರ ಒಟ್ಟಾಗಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು
ತಿಪಟೂರು ಎಪಿಎಂಸಿ ಆವರಣದಲ್ಲಿ ಶಾಸಕ ಬಿ.ಸಿ.ನಾಗೇಶ್ ಮತ್ತು ಬಿಜೆಪಿ ಮುಖಂಡ ಲೋಕೇಶ್ವರ ಒಟ್ಟಾಗಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು   

ತಿಪಟೂರು: ಮುಂದಿನ 20 ತಿಂಗಳ ಅವಧಿಗೆ ತಿಪಟೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹೊಗವನಘಟ್ಟ ಎಚ್.ಬಿ.ದಿವಾಕರ್, ಉಪಾಧ್ಯಕ್ಷರಾಗಿ ತರಕಾರಿ ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ನಡೆದ ಚುನಾವಣೆಯಲ್ಲಿ ಶಾಸಕ ಬಿ.ಸಿ.ನಾಗೇಶ್ ಮತ್ತು ಬಿಜೆಪಿ ಮುಖಂಡ ಲೋಕೇಶ್ವರ ಒಟ್ಟಾಗಿ ಚುನಾವಣೆಯ ಸಾರಥ್ಯ ವಹಿಸಿದ್ದು, ಬಿಜೆಪಿ ಬೆಂಬಲಿಗರು ಎಪಿಎಂಸಿ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾದರು.

ಎಚ್.ಬಿ.ದಿವಾಕರ್. ಮಾತನಾಡಿ, ‘ಎಪಿಎಂಸಿಯಲ್ಲಿ ಹಲವು ವರ್ಷಗಳ ಅನುಭವವಿದ್ದು, ರೈತರಿಗೆ ಅಗತ್ಯವಿರುವ ಎಲ್ಲ ಸೌಕರ್ಯಗಳನ್ನು ಒದಗಿಸಲು ಕಟಿಬದ್ಧರಾಗಿದ್ದೇವೆ. ಎಲ್ಲರೂ ಸಹಕರಿಸಬೇಕು’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.