ADVERTISEMENT

ಈಜಾಡಲು ಹೋಗಿ ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 7:04 IST
Last Updated 7 ಅಕ್ಟೋಬರ್ 2022, 7:04 IST

ತುಮಕೂರು: ಜಯಮಂಗಲಿ ನದಿಯಲ್ಲಿ ಈಜಾಡಲು ಹೋಗಿ ಬಾಲಕ ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.

ಚಿಕ್ಕದಾಳವಟ್ಟ ಗ್ರಾಮದ ನಿವಾಸಿಯಾದ ಶಂಕರಪ್ಪ ಅವರ ಪುತ್ರ ಚೇತನ (14) ಮೃತಪಟ್ಟ ದುರ್ದೈವಿ. ದ್ವಿಚಕ್ರ ವಾಹನ ತೊಳೆದು ಜಯಮಂಗಲಿ ನದಿಯಲ್ಲಿ ಇಬ್ಬರು ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT