ADVERTISEMENT

ಮಧುಗಿರಿ: ಮಳೆಗೆ ಕೊಚ್ಚಿಹೋದ ಸೇತುವೆ, ಸಂಪರ್ಕ ಕಡಿತ

​ಪ್ರಜಾವಾಣಿ ವಾರ್ತೆ
Published 18 ಮೇ 2022, 8:28 IST
Last Updated 18 ಮೇ 2022, 8:28 IST
ಆಚೇನಹಳ್ಳಿಗೆ ತೆರಳುವ ಸಂಪರ್ಕ ಸೇತುವೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ
ಆಚೇನಹಳ್ಳಿಗೆ ತೆರಳುವ ಸಂಪರ್ಕ ಸೇತುವೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ   

ತುಮಕೂರು: ಜಿಲ್ಲೆಯ ಮಧುಗಿರಿ ತಾಲ್ಲೂಕಿನಲ್ಲಿ ಸುರಿದ ಮಳೆಗೆ ಕಸಬಾ ಹೋಬಳಿ ವ್ಯಾಪ್ತಿಯ ಆಚೇನಹಳ್ಳಿಗೆ ತೆರಳುವ ಸಂಪರ್ಕ ಸೇತುವೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿದೆ.

ರಸ್ತೆ ಸಂಚಾರಕ್ಕೆ ಜನರು ಪರದಾಡುವಂತಾಗಿದೆ. ತಕ್ಷಣ ಸೇತುವೆ ದುರಸ್ತಿಗೊಳಿಸಿ, ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡುವಂತೆ ಜನರು ಒತ್ತಾಯಿಸಿದ್ದಾರೆ.

ತುರುವೇಕೆರೆ ತಾಲ್ಲೂಕಿನ ದಂಡಿನಶಿವರ ವ್ಯಾಪ್ತಿಯಲ್ಲಿ 6, ಮಾಯಸಂದ್ರ, ಶ್ರೀರಾಂಪುರ ಗ್ರಾಮದಲ್ಲಿ ತಲಾ ಒಂದು ವಾಸದ ಮನೆಯ ಗೋಡೆ ಕುಸಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.