ಕುಣಿಗಲ್: ಎಡೆಯೂರುಸಿದ್ಧಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ₹10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ದೇವಾಲಯ ಪ್ರವೇಶ ಪ್ರಾಂಗಣ, ನಡು ಪ್ರಾಂಗಣ ಮತ್ತು ಸಿದ್ಧಲಿಂಗೇಶ್ವರ ಸ್ವಾಮಿಯ ಪವಾಡ ದೃಶ್ಯಗಳನ್ನೊಳಗೊಂಡ ಪ್ರದಕ್ಷಿಣಾ ಪ್ರಾಂಗಣವನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ದರ್ಶನ ಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಿದರು.
ಮುಖ್ಯಮಂತ್ರಿ ಅವರೊಂದಿಗೆ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ, ವಿಜಯೇಂದ್ರ ಹಾಗೂ ಕುಟುಂಬದ ಸದಸ್ಯರು ದೇವಸ್ಥಾನದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಡಂಬಳ- ಗದಗ ಜಗದ್ಗುರು ತೋಂಟದಾರ್ಯ ಸಿದ್ಧರಾಮ ಸ್ವಾಮೀಜಿ, ಬಾಳೆಹೊನ್ನೂರು ಶಾಖಾಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವರು ಸಾನಿಧ್ಯವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.